Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:5 - ಕನ್ನಡ ಸತ್ಯವೇದವು C.L. Bible (BSI)

5 ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ - ಮಗನೇ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಲೊಕಾಂಚೊ ವಿಶ್ವಾಸ್ ಬಗುನ್, ಜೆಜುನ್ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ “ಮಾಜ್ಯಾ ಪೊರಾ, ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:5
28 ತಿಳಿವುಗಳ ಹೋಲಿಕೆ  

ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


ನಿಮ್ಮಲ್ಲಿ ಅನೇಕರು ಈ ಕಾರಣದಿಂದಲೇ ದುರ್ಬಲರು, ಅಸ್ವಸ್ಥರು ಆಗಿದ್ದೀರಿ; ಮತ್ತು ಎಷ್ಟೋಮಂದಿ ಸತ್ತಿದ್ದಾರೆ.


ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?


ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು