Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:17 - ಕನ್ನಡ ಸತ್ಯವೇದವು C.L. Bible (BSI)

17 ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ, ತೆಂಚ್ಯಾ ಭುತ್ತುರ್ ತ್ಯಾ ಗೊಸ್ಟಿಯಾ ಖೊಲಾತ್ ಜಾಯ್ನಸಲ್ಲ್ಯಾಸಾಟ್ನಿ, ತ್ಯಾ, ತೆಂಚೆಕ್ಡೆ ಲೈ ಎಳ್ ರೈನಾತ್. ದೆವಾಚ್ಯಾ ಗೊಸ್ಟಿಯಾಕ್ನಿ ಲಾಗುನ್ ತರಾಸ್, ನಾಜಾಲ್ಯಾರ್, ಕಸ್ಟ್, ಯೆಲ್ಲ್ಯಾತನ್ನಾ ತೆನಿ ತ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:17
23 ತಿಳಿವುಗಳ ಹೋಲಿಕೆ  

ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


“ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.


ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ.


ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು