Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:38 - ಕನ್ನಡ ಸತ್ಯವೇದವು C.L. Bible (BSI)

38 ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ದೋಣಿಯ ಹಿಂಭಾಗದಲ್ಲಿ ತಲೆಗಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ - ಗುರುವೇ, ನಾವು ಮುಳುಗಿಹೋಗುವದರಲ್ಲಿ ನಿನಗೆ ಚಿಂತೆಯಿಲ್ಲವೇ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ಜೆಜು, ಢೊನಿತ್, ಫಾಟಿಕ್ಡೆ ಉಶ್ಯಾ ವರ್‍ತಿ ಟಕ್ಲೆ ಥವ್ನ್ ಘೆವ್ನ್ ನಿಜಲ್ಲೊ. ಶಿಸಾನಿ ತೆಕಾ ಉಟ್ವುಲ್ಯಾನಿ, ಅನಿ “ಗುರುಜಿ, ಅಮಿ ಮರುನ್ ಗೆಲ್ಲ್ಯಾರ್‍ಬಿ, ತುಕಾ ಕಾಯ್ ಪರ್ವಾ ನಾ ಕಾಯ್?” ಮನುನ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:38
22 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು.


ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.


ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿಹೋಗುವುದರಲ್ಲಿತ್ತು.


ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು