Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:41 - ಕನ್ನಡ ಸತ್ಯವೇದವು C.L. Bible (BSI)

41 ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ಲೈ ಭಿಂವ್ನ್ ಗೆಲ್ಲೆ, ಅನಿ ಎಕಾಮೆಕಾಕ್ “ಹ್ಯೊ ಮಾನುಸ್ ಕೊನ್? ವಾರೊ ಅನಿ ಲ್ಹಾಟಾಸೈತ್ ಹೆನಿ ಸಾಂಗಟಲ್ಲೆ ಅಯಿಕ್ತ್ಯಾತ್!”ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:41
17 ತಿಳಿವುಗಳ ಹೋಲಿಕೆ  

ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.


‘ಇಲ್ಲಿಯತನಕ ಬರಬಹುದು, ಇದನು ಮೀರಿ ಬರಕೂಡದು’ ‘ಮೊರೆವ ನಿನ್ನ ತೆರೆಗೆ ಇಲ್ಲಿಗೇ ತಡೆ’ ಎಂದು ವಿಧಿಸಿದವನು ನಾನು.


ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.


“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.


ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು