Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:13 - ಕನ್ನಡ ಸತ್ಯವೇದವು C.L. Bible (BSI)

13 ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು - ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ಅಲ್ಲಿ ಉಸುರುಕಟ್ಟಿ ಸತ್ತಿತು. ಹೆಚ್ಚು ಕಡಿಮೆ ಎರಡು ಸಾವಿರ ಹಂದಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ತೆಂಕಾ, ಜಾವ್ಕ್ ಸೊಡ್ಲ್ಯಾನ್, ತಿ ಗಿರೊ, ತ್ಯಾ ಮಾನ್ಸಾಕ್ ಸೊಡುನ್, ಡುಕ್ರಾಂಚ್ಯಾ ಆಂಗಾತ್ನಿ ಜಾವ್ನ್ ಗುಸ್ಲಿ, ಅನಿ ಸುಮಾರ್ ದೊನ್ ಹಜಾರ್ ಡುಕ್ರಾಂಚೊ, ಸಗ್ಳೊ ತಾಂಡೊ ಸಮುಂದರಾತ್ ಹುಡಿ ಮಾರುನ್ ಬುಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:13
12 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.


ಆ ಒಂದು ಸಾವಿರ ವರ್ಷಗಳು ಮುಗಿದ ನಂತರ ಸೈತಾನನನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದು.


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಯೇಸು, “ಹೋಗಿ” ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿಹೋಯಿತು.


ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.


‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.


ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು