Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:24 - ಕನ್ನಡ ಸತ್ಯವೇದವು C.L. Bible (BSI)

24 ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕಿಕೊಂಡು ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜು ತೆಚ್ಯಾ ವಾಂಗ್ಡಾ ಗೆಲೊ, ಸುಮಾರ್ ಲೊಕಾ, ತೆಚ್ಯಾ ವಾಂಗ್ಡಾ ಜಾವ್‍ಲಾಗಲ್ಲಿ. ಅನಿ ತೆಚ್ಯಾ ಭೊತ್ಯಾನಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:24
12 ತಿಳಿವುಗಳ ಹೋಲಿಕೆ  

ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು.


ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ.


ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ.


ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.


ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. ಯಾರೂ ಮುಟ್ಟಲಿಲ್ಲವೆಂದು ಎಲ್ಲರು ಹೇಳುತ್ತಿರಲು ಪೇತ್ರನು, “ಪ್ರಭೂ, ಇಷ್ಟೊಂದು ಜನರು ಮೇಲೆ ಮೇಲೆ ಬೀಳುತ್ತಾ ನಿಮ್ಮನ್ನು ಒತ್ತರಿಸುತ್ತಿದ್ದಾರಲ್ಲಾ,” ಎಂದನು.


ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.


ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು