Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:43 - ಕನ್ನಡ ಸತ್ಯವೇದವು C.L. Bible (BSI)

43 ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವರು ಬಹಳ ಆಶ್ಚರ್ಯದಿಂದ ಬೆರಗಾದರು. ಆಮೇಲೆ ಆತನು ಅವರಿಗೆ - ಇದು ಯಾರಿಗೂ ತಿಳಿಯಬಾರದೆಂದು ಬಹು ಖಂಡಿತವಾಗಿ ಹೇಳಿ ಆ ಹುಡುಗಿಗೆ ಊಟಮಾಡಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಾನಾ ಜೆಜುನ್ ಹಿ ಖಬರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ತೆಂಕಾ ಖಡಕ್ ತಾಕಿತ್ ದಿಲ್ಯಾನ್ ಅನಿ “ತ್ಯಾ ಚೆಡ್ಬಾಕ್ ಕಾಯ್ ತರ್ ಖಾವ್ಕ್ ದಿವಾ”,ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:43
15 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು.


ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.


ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.


“ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.


ಬಾಲಕಿಯ ತಂದೆತಾಯಿಗಳು ಆಶ್ಚರ್ಯಚಕಿತರಾದರು. ಆಗ ಯೇಸು ನಡೆದ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಆಜ್ಞಾಪಿಸಿದರು.


ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.


ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.


ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು