Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:14 - ಕನ್ನಡ ಸತ್ಯವೇದವು C.L. Bible (BSI)

14 ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಅರಸನಾದ ಹೆರೋದನು [ಯೇಸುವಿನ ಸುದ್ದಿಯನ್ನು] ಕೇಳಿದನು. ಯಾಕಂದರೆ ಆತನ ಹೆಸರು ಪ್ರಸಿದ್ಧವಾಯಿತು, ಮತ್ತು ಜನರು ಆತನ ವಿಷಯದಲ್ಲಿ - ಸ್ನಾನಿಕನಾದ ಯೋಹಾನನೇ ತಿರಿಗಿ ಬದುಕಿಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆರೊದ್ ರಾಜಾನ್ ಹೆಚ್ಯಾ ವಿಶಯಾತ್ ಆಯ್ಕ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಜೆಜುಚಿ ಖಬರ್ ಸಗ್ಳ್ಯಾಕ್ಡೆ ಫರ್ಗಟಲ್ಲಿ. ಥೊಡೆಜಾನಾ “ಬಾಲ್ತಿಮ್‍ ದಿತಲೊ ಜುವಾಂವ್ ಮರಲ್ಲೊ ಅನಿ ಝಿತ್ತೊ ಹೊವ್ನ್ ಯೆಲಾ! ತಸೆ ಮನುನ್ ತೆಕಾ ಅಜಾಪಾ ಕರ್‍ತಲೊ ಬಳ್ ಹಾಯ್” ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:14
16 ತಿಳಿವುಗಳ ಹೋಲಿಕೆ  

ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.


ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.


ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ಅದಕ್ಕೆ ಶಿಷ್ಯರು, “ಕೆಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ, ಇನ್ನು ಕೆಲವರು ‘ಎಲೀಯನು,’ ಮತ್ತೆ ಕೆಲವರು ಪ್ರವಾದಿಗಳಲ್ಲಿ ತಾವೂ ಒಬ್ಬರು ಎನ್ನುತ್ತಾರೆ' ” ಎಂದರು.


ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.


ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.


ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.


ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು.


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.


ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು