Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:20 - ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಹೆರೊದ್ ಭಿಂವ್ ಲಾಗಲ್ಲೊ ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಬರೊ ಅನಿ ಪವಿತ್ರ್ ಮಾನುಸ್ ಮನುನ್ ತೆಕಾ ಗೊತ್ತ್ ಹೊತ್ತೆ,ತಸೆ ಮನುನ್ ತೊ ತೆಕಾ ಕಾಯ್ಬಿ ತರಾಸ್ ಹೊವ್ಕ್ ದಿ ನಸಿ, ತೊ ಸಾಂಗ್ತಾನಾ ತೆಕಾ ತರಾಸ್ ಹೊಲ್ಯಾರ್ಬಿ, ತೊ ಕುಶಿನ್ ತೆಚೆ ಆಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:20
21 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.


ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.


ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ.


ಆಗ ದಾನಿಯೇಲನು ರಾಜನಿಗೆ, “ಅರಸರೇ, ನಿಮ್ಮ ದಾನಗಳು ನಿಮಗೇ ಇರಲಿ. ನಿಮ್ಮ ಬಹುಮಾನಗಳು ಮತ್ತೊಬ್ಬನಿಗೆ ದೊರಕಲಿ. ಆದರೆ ನಾನು ಈ ಬರಹವನ್ನು ಓದಿ ಅದರ ಅರ್ಥವನ್ನು ತಮಗೆ ತಿಳಿಸುವೆನು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.


ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು.


ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು.


ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.


ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು