Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:21 - ಕನ್ನಡ ಸತ್ಯವೇದವು C.L. Bible (BSI)

21 ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಅವಳಿಗೆ ಅನುಕೂಲವಾದ ದಿವಸ ಬಂತು; ಹೇಗಂದರೆ ಹೆರೋದನು ತಾನು ಹುಟ್ಟಿದ ದಿವಸದಲ್ಲಿ ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಮಾಡಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಆಕ್ರಿಕ್, ಹೆರೊದಿಯಾಸಾಕ್ ಎಕ್ ಬರೊ ಅವ್ಕಾಸ್ ಗಾವ್ಲೊ, ಹೆರೊದಾನ್ ಅಪ್ನಾಚ್ಯಾ ಜಲ್ಮಾಚ್ಯಾ ದಿಸಿ, ಅಪ್ನಾಚ್ಯಾ ರಾಜಾತ್ಲ್ಯಾ ಸಗ್ಳ್ಯಾ ಅದಿಕಾರ್‍ಯಾಕ್ನಿ, ಸೈನಿಕಾಂಚ್ಯಾ ಮುಖಂಡಾಕ್ನಿ ಅನಿ ಗಾಲಿಲಿಯಾಚ್ಯಾ ಮೊಟ್ಯಾ-ಮೊಟ್ಯಾ ಲೊಕಾಕ್ನಿ ಎಕ್ ಮೊಟೆ ಜೆವಾನ್ ಥವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:21
15 ತಿಳಿವುಗಳ ಹೋಲಿಕೆ  

ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.


ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.


ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು