Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:15 - ಕನ್ನಡ ಸತ್ಯವೇದವು C.L. Bible (BSI)

15 “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೊರಗಿನಿಂದ ಮನುಷ್ಯನೊಳಕ್ಕೆ ಹೋಗಿ ಅವನನ್ನು ಹೊಲೆಮಾಡತಕ್ಕಂಥದು ಒಂದೂ ಇಲ್ಲ; ಆದರೆ ಮನುಷ್ಯನೊಳಗಿಂದ ಹೊರಡುವವುಗಳೇ ಮನುಷ್ಯನನ್ನು ಹೊಲೆಮಾಡುವಂಥವುಗಳಾಗಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕಾಯ್ ಭಾಯ್ನಾ ಎಕ್ ಮಾನ್ಸಾಚ್ಯಾ ಭುತ್ತುರ್ ಜಾತಾ ತೆ ಕಾಯ್ಬಿ ಮಾನ್ಸಾಕ್ ಅಶುದ್ದ್ ಕರಿನಾ, ಮಾನ್ಸಾಚ್ಯಾ ತೊಂಡಾತ್ನಾ ಜೆ ಕಾಯ್ ಭಾಯ್ರ್ ಯೆತಾ ತೆ ಮಾನ್ಸಾಕ್ ಅಶುದ್ದ್ ಕರ್ತಾ”,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:15
17 ತಿಳಿವುಗಳ ಹೋಲಿಕೆ  

ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಯೇಸು ಇಂತೆಂದರು: “ನೀವು ಕೂಡ ಮಂದಮತಿಗಳೇನು? ಇದರ ಅರ್ಥ ನಿಮಗೂ ಆಗದೇನು?


ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು,


ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು