Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:36 - ಕನ್ನಡ ಸತ್ಯವೇದವು C.L. Bible (BSI)

36 ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಆತನು - ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಹಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಈ ಸಂಗತಿಯನ್ನು ತಿಳಿಸಕೂಡದೆಂದು ಯೇಸು ಜನರಿಗೆ ಆಜ್ಞಾಪಿಸಿದನು. ತನ್ನ ಬಗ್ಗೆ ಇತರ ಜನರಿಗೆ ತಿಳಿಸಕೂಡದಂತೆ ಯೇಸು ಯಾವಾಗಲೂ ಆಜ್ಞಾಪಿಸುತ್ತಿದ್ದನು. ಆದರೂ ಜನರು ಆತನ ಬಗ್ಗೆ ಇನ್ನೂ ಹೆಚ್ಚಾಗಿ ಹಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಹಿ ಖಬರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ಜೆಜುನ್ ತ್ಯಾ ಲೊಕಾಕ್ನಿ ಸಾಂಗ್ಲ್ಯಾನ್ ಜೆಜು ಅಪ್ನಾಚ್ಯಾ ವಿಶಯಾತ್ ಕವ್ಡೆ ಸಾಂಗುನಕಾಸಿ ಮನುನ್ ಸಾಂಗಿ, ತವ್ಡೆ ಲೊಕಾ ತೆಚಿ ಖಬರ್ ಫರ್ಗಟಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:36
8 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಅನಂತರ ಯೇಸು, “ನೀನು ಊರೊಳಗೆ ಹೋಗುವುದೇ ಬೇಡ,” ಎಂದು ಅವನಿಗೆ ಆಜ್ಞಾಪಿಸಿ, ಮನೆಗೆ ಕಳುಹಿಸಿಬಿಟ್ಟರು.


ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.


ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.


ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು.


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು