Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:35 - ಕನ್ನಡ ಸತ್ಯವೇದವು C.L. Bible (BSI)

35 ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿಯೂ ಸುವಾರ್ತೆಯ ನಿವಿುತ್ತವಾಗಿಯೂ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಅಪ್ನಾಚೊ ಜಿವ್ ಹುರ್‍ವುನ್ ಘೆವ್ಕ್ ಬಗ್ತಾ, ತೊ ಕಳ್ದುನ್ ಘೆತಾ, ಅನಿ ಜೊ ಕೊನ್ ಮಾಜೆ ಸಾಟ್ನಿ ಅನಿ ದೆವಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಅಪ್ನಾಚೊ ಜಿವ್ ಕಳ್ದುನ್ ಘೆತಾ ತೊ ಅಪ್ನಾಚೊ ಜಿವ್ ಹುರ್‍ವುನ್ ಘೆತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:35
27 ತಿಳಿವುಗಳ ಹೋಲಿಕೆ  

ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


“ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ.


ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ.


ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದು, ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಬರುವ ಲಾಭವಾದರೂ ಏನು?


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು