Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:17 - ಕನ್ನಡ ಸತ್ಯವೇದವು C.L. Bible (BSI)

17 ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಗುಂಪಿನಲ್ಲಿ ಒಬ್ಬನು - ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರಕೊಂಡು ಬಂದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಬ್ಬನು, “ಗುರುವೇ, ನನ್ನ ಮಗನಿಗೆ ದೆವ್ವ ಹಿಡಿದಿದ್ದ ಕಾರಣ ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಅವನು ಮಾತಾಡಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ತ್ಯಾ ಲೊಕಾನಿತ್ಲ್ಯಾ ಎಕ್ ಮಾನ್ಸಾನ್ “ಗುರುಜಿ,ಮಾಜ್ಯಾ ಲೆಕಾಕ್ ಮಿಯಾ ತುಜೆಕ್ಡೆ ಘೆವ್ನ್ ಯೆಲಾ, ತೆಕಾ ಗಿರೊಲಾಗ್ಲಾ ತೆಕಾ ಬೊಲುಕ್ ಹೊಯ್ನಾ.” ಮನುನ್ ಜೆಜುಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:17
12 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು.


ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು.


ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ಕಟಾಕ್ಷಿಸಿರಿ, ನನಗೆ ಇವನೊಬ್ಬನೇ ಮಗ.


ಕೆಲವರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು. ಶಿಷ್ಯರು ಆ ಜನರನ್ನು ಗದರಿಸಿದರು.


ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


“ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದುಬಿಡುತ್ತಾನೆ.


ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.


ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.


ಯೇಸುಸ್ವಾಮಿ, “ನಿಮ್ಮ ವಾಗ್ವಾದ ಏನು?” ಎಂದು ಕೇಳಿದರು.


ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು