Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನನ್ನು ಆತನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಅವನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ತೆನಿ ತ್ಯಾ ಪೊರಾಕ್ ತೆಚೆಕ್ಡೆ ಘೆವ್ನ್ ಯೆಲ್ಯಾನಿ. ಜೆಜುಕ್ ಬಗಟಲ್ಲೆಚ್ ತ್ಯಾ ಗಿರ್‍ಯಾನ್ ತೆಕಾ ಕಡ್ಕಡಿ ಸರ್ಕೆ ಕರ್‍ಲ್ಯಾನ್ , ತ್ಯಾ ಪೊರಾಕ್ ಜಿಮ್ನಿಕ್ ಪಾಡ್ವುಲ್ಯಾನ್ ತನ್ನಾ ತೊ ಪೊರ್ ಖಾಲ್ತಿ ಪಡುನ್ ತೊಂಡಾತ್ನಾ ಫೆನ್ ಕಾಡುನ್ಗೆತ್ ತಳ್ಮಳುಕ್ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:20
14 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಆಶ್ಚರ್ಯಚಕಿತರಾದರು.


ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.


ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಆಗಲೆ ಕಟ್ಟಪ್ಪಣೆ ಮಾಡಿದ್ದರು. ಎಷ್ಟೋ ಸಾರಿ ಅದು ಅವನ ಮೇಲೆ ಬಂದಿತ್ತು. ಜನರು ಅವನನ್ನು ಸರಪಳಿ ಸಂಕೋಲೆಗಳಿಂದ ಬಂಧಿಸಿ ಕಾವಲಿನಲ್ಲಿ ಇಟ್ಟಿದ್ದರೂ ಅವುಗಳನ್ನು ಅವನು ಮುರಿದುಹಾಕುತ್ತಿದ್ದನು; ದೆವ್ವ ಅವನನ್ನು ಬೆಂಗಾಡಿಗೆ ಅಟ್ಟುತ್ತಿತ್ತು.


ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.


ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;


ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು