Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:31 - ಕನ್ನಡ ಸತ್ಯವೇದವು C.L. Bible (BSI)

31 ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಕಶ್ಯಾಕ್ ಮಟ್ಲ್ಯಾರ್ ತೊ ಶಿಸಾಕ್ನಿ ಶಿಕ್ವುಲಾಗಲ್ಲೊ. ತನ್ನಾ ಜೆಜುನ್ “ಮಾನ್ಸಾಚ್ಯಾ ಲೆಕಾಕ್ ಧರುನ್ ಲೊಕಾಂಚ್ಯಾ ಹಾತಾತ್ ದಿತ್ಯಾತ್, ಅನಿ ತಿ ಲೊಕಾ ತೆಕಾ ಜಿವಾನಿ ಮಾರ್‍ತ್ಯಾತ್, ಜಾಲ್ಯಾರ್‍ಬಿ ತಿನ್ವ್ಯಾ ದಿಸಿ ತೊ ಅನಿ ಪರ್ತುನ್ ಝಿತ್ತೊ ಹೊವ್ನ್ ಉಟುನ್ ಯೆತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:31
19 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?


ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


ಅದಕ್ಕೆ ಯೇಸು, ‘ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು