Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:41 - ಕನ್ನಡ ಸತ್ಯವೇದವು C.L. Bible (BSI)

41 ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ತುಮಿ ಮಾಜ್ಯೆ ಮನುನ್ ಕಳುನ್, ಕೊನ್ ತರ್ ತುಮ್ಕಾ ಎಕ್ ತಾಂಬ್ಯಾ ಪಾನಿ ದಿಲ್ಯಾರ್ಬಿ, ತೆಂಕಾ ತೆಚೊ ಪ್ರತಿಫಳ್ ಖರೆಚ್ ವಾವುನುಚ್ ಗಾವ್ತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:41
11 ತಿಳಿವುಗಳ ಹೋಲಿಕೆ  

ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.


ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.


ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.


ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು