Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 1:2 - ಕನ್ನಡ ಸತ್ಯವೇದವು C.L. Bible (BSI)

2 ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 1:2
33 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.


ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.


“ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ, ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,


ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.


ಮನುಜರೇ, ನಾನು ಕರೆಯುತ್ತಿರುವುದು ನಿಮ್ಮನ್ನೆ ನಾನು ಕೂಗಿ ಕರೆಯುತ್ತಿರುವುದು ಮಾನವ ಕುಲಪುತ್ರರನ್ನೆ.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು