ಮೀಕ 1:7 - ಕನ್ನಡ ಸತ್ಯವೇದವು C.L. Bible (BSI)7 ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.