Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 2:12 - ಕನ್ನಡ ಸತ್ಯವೇದವು C.L. Bible (BSI)

12 “ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟಾಗಿ ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 2:12
28 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.


ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಬೆಲಗನು ಸತ್ತ ಮೇಲೆ ಬೊಚ್ರದವನಾದ ಚೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು.


ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು.


ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲ ಸ್ಥಳಗಳಿಂದ ಬಿಡಿಸಿ, ಜನಾಂಗಗಳ ವಶದಿಂದ ತಪ್ಪಿಸಿ, ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ ಇಸ್ರಯೇಲಿನ ಬೆಟ್ಟಗಳಲ್ಲೂ, ತೊರೆಗಳ ಬಳಿಯಲ್ಲೂ ನಾಡಿನ ಎಲ್ಲ ಹಕ್ಕೆಗಳಲ್ಲೂ ಮೇಯಿಸುವೆನು;


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು