Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 3:5 - ಕನ್ನಡ ಸತ್ಯವೇದವು C.L. Bible (BSI)

5 ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 3:5
25 ತಿಳಿವುಗಳ ಹೋಲಿಕೆ  

ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ.


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


“ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.


ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.


ಅವರು : “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡುಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತುಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ !


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು