Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 4:1 - ಕನ್ನಡ ಸತ್ಯವೇದವು C.L. Bible (BSI)

1 ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 4:1
53 ತಿಳಿವುಗಳ ಹೋಲಿಕೆ  

ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು