Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ಕುದುರೆಗಳನ್ನು ಕಡಿದುಬಿಡುವೆನು. ನಿಮ್ಮ ರಥಗಳನ್ನು ಧ್ವಂಸಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು, ನಿನ್ನ ರಥಗಳನ್ನು ನಾಶಗೊಳಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ನಿನ್ನ ಕುದುರೆಗಳನ್ನು ನಾನು ತೆಗೆದುಬಿಡುವೆನು. ನಿನ್ನ ರಥಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:10
9 ತಿಳಿವುಗಳ ಹೋಲಿಕೆ  

ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು