Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 5:6 - ಕನ್ನಡ ಸತ್ಯವೇದವು C.L. Bible (BSI)

6 ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 5:6
26 ತಿಳಿವುಗಳ ಹೋಲಿಕೆ  

ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II


‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II


ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.)


ನಾನು ಮಾತಾಡಿದ ಮೇಲೆ ಅವರು ಮಾತೆತ್ತುತ್ತಿರಲಿಲ್ಲ ನನ್ನ ಮಾತು ಹನಿಹನಿಯಾಗಿ ಅವರ ಕಿವಿಗೆ ಬೀಳುತ್ತಿತ್ತು.


ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು