Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:10 - ಕನ್ನಡ ಸತ್ಯವೇದವು C.L. Bible (BSI)

10 “ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ; ಅಸಹ್ಯಕರವಾದ ಕಿರಿಯಳತೆ, ಇವು ಇನ್ನೂ ಸಿಕ್ಕುತ್ತಿವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕದ್ದುಕೊಂಡ ಭಂಡಾರಗಳನ್ನು ದುಷ್ಟರು ಇನ್ನೂ ಗುಪ್ತವಾಗಿಡುವರೋ? ಕೆಟ್ಟ ಜನರು ತಮ್ಮ ಚಿಕ್ಕ ಅಳತೆಯಿಂದ ಜನರನ್ನು ಇನ್ನೂ ಮೋಸಪಡಿಸುವರೋ? ಹೌದು, ಅವೆಲ್ಲವೂ ನಡಿಯುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:10
21 ತಿಳಿವುಗಳ ಹೋಲಿಕೆ  

“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ಕಳ್ಳ ಕಲ್ಲುತೂಕಗಳನ್ನೂ ಕಳ್ಳ ಅಳತೆಪಾತ್ರೆಗಳನ್ನೂ ಬಳಸುವವರನ್ನು ಕಂಡರೆ ಸರ್ವೇಶ್ವರನಿಗೆ ಅಸಹ್ಯ.


ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.


ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ.


ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.


ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.


“ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು