Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:6 - ಕನ್ನಡ ಸತ್ಯವೇದವು C.L. Bible (BSI)

6 ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮಗನು ತಂದೆಯನ್ನು ತುಚ್ಫೀಕರಿಸುತ್ತಾನೆ, ಮಗಳು ತಾಯಿಗೆ ಎದುರೇಳುತ್ತಾಳೆ; ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ; ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:6
24 ತಿಳಿವುಗಳ ಹೋಲಿಕೆ  

ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು.


ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ.


ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು