Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:25 - ಕನ್ನಡ ಸತ್ಯವೇದವು C.L. Bible (BSI)

25 ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಲೊಕಾಕ್ನಿ ಸುಟ್ಕಾ ಕರ್ತಲ್ಯಾ ದೆವಾಚೊ ಪುರಾ ನಿಯಮ್ ಉಶ್ಯಾರ್ಕಿನ್ ಶಿಕ್ತಲೊ ಮಾನುಸ್ ಖರೆಚ್‍ಬಿ ಖುಶಿನ್ ಭರುನ್ ರ್‍ಹಾತಾ. ತೊ ತೆ ಶಿಕುನ್ಗೆತ್ ರ್‍ಹಾತಾ ತೊ ದೆವಾಚಿ ಗೊಸ್ಟಿಯಾ ಆಯಿಕ್ತಾ ಅನಿ ಅಪ್ನಿ ಆಯ್ಕಲ್ಲೆ ಇಸ್ರಿನಾ. ತೊ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ತಾ ತಸೆ ಹೊವ್ನ್ ತೊ ಕುಶಿನ್ ಭರಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:25
41 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.


ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ನಿನ್ನ ನಿಯಮದಂತೆ ಬಾಳಲು ಯತ್ನಿಸಿದೆ I ಎಂತಲೇ, ಆತಂಕವಿಲ್ಲದೆ ನಡೆದೆ II


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು