Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:4 - ಕನ್ನಡ ಸತ್ಯವೇದವು C.L. Bible (BSI)

4 ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ತಾಳ್ಮೆಯು ಸಿದ್ಧಿಗೆ ಬರಲಿ; ಆಗ ನೀವು ಶಿಕ್ಷಿತರೂ ಸರ್ವಸುಗುಣವುಳ್ಳವರೂ ಏನೂ ಕಡಿಮೆಯಿಲ್ಲದವರೂ ಆಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆ ಸೊಸುನ್ ಘೆತಲೆ ಅಪ್ಲೆ ಕಾಮ್ ಕರುನ್ ಸಾರುಂದಿತ್ ತನ್ನಾ ತುಮಿ ಕಸ್ಲಿಬಿ ಚುಕ್‍ನಸಲ್ಲೆ, ಪರಿಪುರ್ನ್ ಅನಿ ಖಲ್ಯಾಕ್ಬಿ ಕಮಿ ನತ್ತೆ ಹೊವ್ನ್ ರ್‍ಹಾತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:4
26 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II


ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಜ್ಞಾನವೆಂಬಾಕೆಯನ್ನು ಶ್ರೇಷ್ಠಳೆಂದು ಭಾವಿಸಿದೆಯಾದರೆ, ಆಕೆ ನಿನ್ನನ್ನು ಸನ್ಮಾನಿಸುವಳು. ನೀನು ಅವಳನ್ನು ಅಪ್ಪಿಕೊಂಡೆಯಾದರೆ, ಆಕೆ ನಿನ್ನನ್ನು ಘನಪಡಿಸುವಳು.


ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು