Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:1 - ಕನ್ನಡ ಸತ್ಯವೇದವು C.L. Bible (BSI)

1 ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮಹಿಮೆನ್ ಭರಲ್ಲ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವರ್ತಿ ತುಮಿ ವಿಶ್ವಾಸ್ ಥವಲ್ಲ್ಯಾನು, ತುಮ್ಚ್ಯಾ ಮದ್ದಿ ಪಕ್ಷಪಾತ್ ರ್‍ಹಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:1
29 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.


ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.


ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು,


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ.


ಕೆಲವು ದಿನಗಳ ನಂತರ ಫೆಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರುಸಿಲ್ಲಳೊಂದಿಗೆ ಬಂದು ಪೌಲನನ್ನು ತನ್ನ ಬಳಿಗೆ ಕರೆಯಿಸಿದನು. ಕ್ರಿಸ್ತಯೇಸುವನ್ನು ವಿಶ್ವಾಸಿಸುವ ಬಗ್ಗೆ ಪೌಲನಾಡಿದ ಮಾತುಗಳನ್ನು ಆಲೈಸಿದನು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಪ್ರಿಯ ಸಹೋದರರೇ, ಮೋಸಹೋಗಬೇಡಿ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು