Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:23 - ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಶಾಸ್ತ್ರದ ಮಾತು ಹೀಗೆ ನೆರವೇರಿತು, ಮತ್ತು ದೇವರ ಸ್ನೇಹಿತನೆಂಬ ಹೆಸರು ಅವನಿಗೆ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಅಸೆ “ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್” ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:23
22 ತಿಳಿವುಗಳ ಹೋಲಿಕೆ  

ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?


ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಈ ಕಾರಣ ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”


ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ಪವಿತ್ರಗ್ರಂಥದಲ್ಲಿ ಫರೋಹನಿಗೆ ಹೀಗೆಂದು ಹೇಳಲಾಗಿದೆ: “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ಪ್ರದರ್ಶಿಸುವ ಸಲುವಾಗಿ ಹಾಗು ಜಗತ್ತಿನಲ್ಲೆಲ್ಲಾ ನನ್ನ ಹೆಸರನ್ನು ಪ್ರಖ್ಯಾತಪಡಿಸಿಕೊಳ್ಳುವ ಸಲುವಾಗಿ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು.


ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು.


ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಉಪಯುಕ್ತವಾಗಿದೆ.


“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.


ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುವುದು ವಿಶ್ವಾಸದಿಂದ ಮಾತ್ರವಲ್ಲ, ವಿಶ್ವಾಸವು ಸತ್ಕ್ರಿಯೆಗಳೊಡನೆ ಬೆರೆತಾಗ ಮಾತ್ರ ಎಂಬುದು ನಿಮಗೆ ತಿಳಿದಿರಲಿ.


ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು