Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:25 - ಕನ್ನಡ ಸತ್ಯವೇದವು C.L. Bible (BSI)

25 ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಚ್ ವೆಭಿಚಾರ್ ಕರ್ತಲ್ಯಾ ರಾಹಾಬ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತಿಚ್ಯಾ ಕಾಮಾಂಚ್ಯಾ ವೈನಾ ನಿತಿವಂತ್ ಮನುನ್ ಎಚುನ್ ಹೊಲೆ ನ್ಹಯ್? ತಿನಿ ಖಬರ್ ದಿತಲ್ಯಾಕ್ನಿ ಸ್ವಾಗತ್ ಕರ್ಲಿನ್ ಅನಿ ಎಕ್ ದುಸ್ರ್ಯಾಚ್ ವಾಟೆನ್ ತೆಂಕಾ ಧಾಡುನ್ ದಿಲಿನ್, ಅಶೆ ತಿಚ್ಯಾ ಹ್ಯಾ ಕಾಮಾಂಚ್ಯಾ ವೈನಾ ತಿಕಾ ನಿತಿವಂತ್ ಮನುನ್ ಎಚುನ್ ಕಾಡುನ್ ಹೊಲೆ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:25
15 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.


ಅವಳ ಮನೆ ಊರಗೋಡೆಯ ಮೇಲಿತ್ತು. ಆದ್ದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು.


ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.


ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ,


ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ಆದರೆ ಅವಳು ಆ ವ್ಯಕ್ತಿಗಳನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳೊಳಗೆ ಬಚ್ಚಿಟ್ಟಿದ್ದಳು.


ಅಲ್ಲದೆ ಅವರಿಗೆ, “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿಹೋಗಿ, ಮೂರು ದಿನ ಅವಿತುಕೊಂಡಿರಿ. ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿ,” ಎಂದಳು.


ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.


ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುವುದು ವಿಶ್ವಾಸದಿಂದ ಮಾತ್ರವಲ್ಲ, ವಿಶ್ವಾಸವು ಸತ್ಕ್ರಿಯೆಗಳೊಡನೆ ಬೆರೆತಾಗ ಮಾತ್ರ ಎಂಬುದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು