Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:16 - ಕನ್ನಡ ಸತ್ಯವೇದವು C.L. Bible (BSI)

16 ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖೈ ಇರ್ಸ್ಯಾ ಅನಿ ಖುದ್ಗೆಪಾನ್ ರ್‍ಹಾತಾ, ಥೈ ಗೊಂದಳ್ ಅನಿ ಸಗ್ಳ್ಯಾ ನಮನ್ಯಾಚೆ ಬುರ್ಶೆಪಾನ್‌ಬಿ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:16
11 ತಿಳಿವುಗಳ ಹೋಲಿಕೆ  

ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್‍’ ಎಂದು ಹೆಸರಾಯಿತು.


ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ಆದರೆ ಓನಾನನು, ಹೀಗೆ ಆಗುವ ಸಂತಾನ ತನ್ನದಾಗುವುದಿಲ್ಲವೆಂದು ತಿಳಿದುಕೊಂಡನು. ಅಣ್ಣನಿಗೆ ಸಂತತಿ ಹುಟ್ಟಿಸಲು ಅವನು ಒಪ್ಪಲಿಲ್ಲ. ತನ್ನ ಅತ್ತಿಗೆಯಲ್ಲಿ ಸಂಭೋಗ ಮಾಡುವಾಗಲೆ ತನ್ನ ವೀರ್ಯವನ್ನು ಹಾಸಿಗೆಪಾಲು ಮಾಡುತ್ತಿದ್ದನು.


ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು