Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:12 - ಕನ್ನಡ ಸತ್ಯವೇದವು C.L. Bible (BSI)

12 ನ್ಯಾಯವಿಧಿಗಳನ್ನು ಕೊಟ್ಟವರೂ ನ್ಯಾಯಾಧಿಪತಿಯೂ ಒಬ್ಬರೇ; ಅವರೇ ಉದ್ಧಾರಮಾಡುವುದಕ್ಕೂ ವಿನಾಶಗೊಳಿಸುವುದಕ್ಕೂ ಶಕ್ತರು. ಹೀಗಿರುವಲ್ಲಿ, ನಿನ್ನ ನೆರೆಯವನಿಗೆ ತೀರ್ಪುಕೊಡಲು ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನ್ಯಾಯವನ್ನು ವಿಧಿಸಿದ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪು ಮಾಡುವದಕ್ಕೆ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರೊಬ್ಬನೇ ನಿಯಮಗಳನ್ನು ಮಾಡುವಾತನು. ಆತನೊಬ್ಬನೇ ನಿಜವಾದ ನ್ಯಾಯಾಧಿಪತಿ. ದೇವರೊಬ್ಬನೇ ರಕ್ಷಿಸಬಲ್ಲನು ಮತ್ತು ನಾಶಮಾಡಬಲ್ಲನು. ಆದ್ದರಿಂದ ಬೇರೊಬ್ಬ ವ್ಯಕ್ತಿಯ ಬಗ್ಗೆ ತೀರ್ಪು ನೀಡುವುದು ನಿಮಗೆ ಯೋಗ್ಯವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖಾಯ್ದೆ ದಿಲ್ಲೊ ಎಕ್ಲೊಚ್ ಅನಿ ನ್ಯಾಯ್ ಕರ್ತಲೊ ಎಕ್ಲೊಚ್, ತೊಚ್ ರಾಕ್ವನ್ ಕರುಕ್‍ಬಿ ಅನಿ ನಾಸ್ ಕರುಕ್‌ಬಿ ಸಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:12
11 ತಿಳಿವುಗಳ ಹೋಲಿಕೆ  

ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


“ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು