Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:8 - ಕನ್ನಡ ಸತ್ಯವೇದವು C.L. Bible (BSI)

8 ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ದೆವಾಕ್ಡೆ ಜಗೊಳ್ ಯೆವಾ ಅನಿ ತೊ ಬಿ ತುಮ್ಚ್ಯಾಕ್ಡೆ ಯೆತಾ. ಪಾಪಿಯಾನು, ತುಮ್ಚಿ ಹಾತಾ ಧುವಾ. ಕುಸ್ಡ್ಯಾನು ತುಮ್ಚಿ ಮನಾ ನಿತಳ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:8
44 ತಿಳಿವುಗಳ ಹೋಲಿಕೆ  

ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?


ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಅವನು ಅವರ ಹತ್ತಿರಕ್ಕೆ ಬಂದು, “ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶಮಾಡುವಿರೋ?


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


“ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.


ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.


ಹಿಮದಿಂದ ನಾನು ಸ್ನಾನಮಾಡಿದರೂ ಚೌಳಿನಿಂದ ನಾನು ಕೈತೊಳೆದರೂ


ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.


ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II


ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


ಸೌಲನು ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಬಲಿಪೀಠಗಳಲ್ಲಿ ಇದೇ ಮೊದಲನೆಯದು.


ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II


ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು