Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:17 - ಕನ್ನಡ ಸತ್ಯವೇದವು C.L. Bible (BSI)

17 ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಲಿಯಾ ಅಮ್ಚ್ಯಾ ಸಾರ್ಕೊಚ್ ಎಕ್ ಮಾನುಸ್ ಹೊತ್ತೊ ತೆನಿ ಭಕ್ತಿನ್ ಪಾವ್ಸ್ ಯವ್ಚೆ ನ್ಹಯ್ ಮನುನ್ ಮಾಗ್ನಿ ಕರ್ಲ್ಯಾನ್, ಸಾಡೆ ತಿನ್ ವರ್ಸಾ ತ್ಯಾ ಗಾಂವಾತ್ ಪಾವ್ಸುಚ್ ಪಡುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:17
7 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದು ನಿಲ್ಲು, ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು