Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:5 - ಕನ್ನಡ ಸತ್ಯವೇದವು C.L. Bible (BSI)

5 ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಈ ಲೋಕದ ಜೀವನವು ಐಶ್ವರ್ಯದಿಂದ ತುಂಬಿದೆ. ನೀವು ಇಷ್ಟಪಟ್ಟದ್ದನ್ನೆಲ್ಲ ಪಡೆದುಕೊಂಡು ತೃಪ್ತರಾದಿರಿ. ವಧಿಸುವ ಕಾಲಕ್ಕೆ ಸಿದ್ಧವಾಗಿರುವ ಪಶುವಿನಂತೆ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮಿ ಎಗ್ದಾಕ್ ಜಿಮ್ನಿಚ್ಯಾ ಸುಖಾಚೆ ಅನಿ ಸಾವ್ಕಾರ್ಕಿಚೆ ಜಿವನ್ ಕರ್ಲ್ಯಾಸಿ, ತುಮ್ಚಿ ಮನಾ ಬಲಿ ದಿತಲ್ಯಾ ದಿಸಾ ಸಾಟ್ನಿ ಪುಟ್‍ಪುಟಿತ್ ಕರುನ್ ಥವ್ನ್ ಘೆಟ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:5
28 ತಿಳಿವುಗಳ ಹೋಲಿಕೆ  

ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.


ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.


“ನನ್ನ ಬಯಕೆ ಈಡೇರಲೆಂದು ಬಲಿಯರ್ಪಿಸಿದ್ದೇನೆ; ಇಂದೇ ನನ್ನ ಹರಕೆಯನ್ನು ತೀರಿಸಿದ್ದೇನೆ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಅವನಿಗೆ ನನ್ನ ಹೆಸರಿನಲ್ಲಿ, ‘ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ!


ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು