Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:7 - ಕನ್ನಡ ಸತ್ಯವೇದವು C.L. Bible (BSI)

7 ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಹೋದರರೇ, ಕರ್ತನು ಪ್ರತ್ಯಕ್ಷನಾಗುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂವಿುಯ ಬೆಲೆಯುಳ್ಳ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಸೆ ರ್‍ಹಾತಾನಾ ಮಾಜ್ಯಾ ಭಾವಾನು ಅನಿ ಭೆನಿಯಾನು, ಧನಿ ಯೆಯ್ ಪತರ್ ಗಮ್ಮ್ ಧರುನ್ ಘೆವ್ನ್ ರ್‍ಹಾವಾ, ಎಕ್ ಸೆತ್ಕಾರಿ ಅಪ್ನಾಚ್ಯಾ ಶೆತಾತ್ಲ್ಯಾ ಪಿಕ್ಕಾಕ್ ಕಸೆ ರಾಕುನ್ ರ್‍ಹಾತಾ ತೆ ಬಗಾ, ತೊ ಶಾಂತ್ಪಾನಾನಿ ಗಮ್ ಧರುನ್ ಘೆವ್ನ್ ಸಮಾದಾನಾನಿ ಪೈಲೆಚೊ ಅನಿ ಆಕ್ರಿಚೊ ಪಾವ್ಸ್ ಯೆಯ್‍ ಪತರ್ ಅಪ್ನಾಚ್ಯಾ ಫೈರಾಸಾಟ್ನಿ ರಾಕುನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:7
32 ತಿಳಿವುಗಳ ಹೋಲಿಕೆ  

“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.


ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ.


ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು