Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:3 - ಕನ್ನಡ ಸತ್ಯವೇದವು C.L. Bible (BSI)

3 ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:3
79 ತಿಳಿವುಗಳ ಹೋಲಿಕೆ  

“ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


“ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.


ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಆ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳನ್ನೂ ಅರ್ಪಿಸಬೇಕು. ಅವುಗಳ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತ ಆದ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.


“ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.


ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು.


ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.


ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.


ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.


ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,


ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.


ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.


“ಯಾರಾದರು ಹರಕೆಯನ್ನು ಸಲ್ಲಿಸುವುದಕ್ಕಾಗಿ ಅಥವಾ ಸ್ವೇಚ್ಛೆಯಿಂದ ಅಂಥ ಬಲಿಯನ್ನು ಒಪ್ಪಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಪೂರ್ತಿಯಾಗಿ ಊಟ ಮಾಡಬೇಕಾಗಿಲ್ಲ; ಮಿಕ್ಕದ್ದನ್ನು ಮರುದಿನ ತಿನ್ನಬಹುದು.


ಅವನು ಬಲಿಪೀಠವನ್ನು ಜಾಲಿಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.


ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.


ಬಾಲಾಕನು ಅಂತೆಯೇ ಮಾಡಿ ಪ್ರತಿಯೊಂದು ಪೀಠದಲ್ಲೂ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದನು.


ದಹನಬಲಿಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದಲ್ಲಿ ದಹಿಸಿಬಿಡಬೇಕು. ಮಿಕ್ಕಬಲಿಗಳನ್ನು ಅರ್ಪಿಸುವಾಗ ರಕ್ತವನ್ನು ಸರ್ವೇಶ್ವರನ ಬಲಿಪೀಠದ ಮೇಲೆ ಸುರಿದುಬಿಟ್ಟು, ಮಾಂಸವನ್ನು ಊಟಮಾಡಬೇಕು.


ಆ ಬಳಿಕ ಬಾಲಾಕನು, “ಬಾ, ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದುಕೊಂಡು ಹೋಗುತ್ತೇನೆ. ಬಹುಶಃ ಅಲ್ಲಿಯಾದರು ನೀನು ಅವರನ್ನು ಶಪಿಸುವಂತೆ ದೇವರು ಅನುಮತಿಸಬಹುದು,” ಎಂದು ಹೇಳಿದನು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಸರ್ವೇಶ್ವರನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಮೋಶೆಗೆ ಸರ್ವೇಶ್ವರ ಹೀಗೆಂದರು:


“ಇದಲ್ಲದೆ ನೀನು ಅವರಿಗೆ ಹೀಗೆಂದು ಆಜ್ಞಾಪಿಸು: ಇಸ್ರಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಿ ಆಗಲಿ ಯಾವನಾದರು ದಹನಬಲಿಯನ್ನು ಆಥವಾ ಬೇರೆ ವಿಧವಾದ ಬಲಿದಾನ ಮಾಡುವಾಗ


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


‘ನೀವು ಅರ್ಪಿಸುವಂಥದ್ದು ಹೋರಿಯಾಗಿದ್ದರೆ, ಅದು ಸರ್ವಾಂಗಹೋಮವೇ ಆಗಿರಲಿ ಅಥವಾ ಹರಕೆಯ ಹಾಗೂ ಬೇರೆ ವಿಧವಾದ ಬಲಿಯೇ ಆಗಿರಲಿ,


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.


“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.


“ನಿಮ್ಮಲ್ಲಿ ಯಾರಾದರು ಮತ್ತೊಬ್ಬನಿಂದ ತಮ್ಮ ವಶಕ್ಕೆ ಕೊಡಲಾದ ವಸ್ತುವಿನ ವಿಷಯದಲ್ಲಾಗಲಿ, ತಮ್ಮ ಬಳಿಯಲ್ಲಿ ಇಡಲಾದ ಅಡವಿನ ವಿಷಯದಲ್ಲಾಗಲಿ, ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ, ಸುಳ್ಳಾಡಿಯೋ, ಮತ್ತೊಬ್ಬನನ್ನು ಮೋಸಗೊಳಿಸಿಯೋ


ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.


“ಸರ್ವೇಶ್ವರನಾದ ನಾನು ಒಂದು ವಿಧಿಯನ್ನು ನೇಮಿಸಿದ್ದೇನೆ. ಅದೇನೆಂದರೆ - ಎಂದೂ ನೊಗವನ್ನು ಹೊರದ ಹಾಗೂ ಯಾವ ಕುಂದುಕೊರತೆಯೂ ಇಲ್ಲದ ಒಂದು ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಯೇಲರಿಗೆ ತಿಳಿಸು.


‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.


ಈ ಪ್ರಾಣಿಗಳೆಲ್ಲಾ ಕಳಂಕರಹಿತವಾಗಿರಬೇಕು. ದೈನಿಕ ದಹನಬಲಿ ಮತ್ತು ಅದಕ್ಕೆ ಸೇರಿದ ಧಾನ್ಯನೈವೇದ್ಯ ಇವುಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನಾರ್ಪಣೆಗಳನ್ನೂ ಸೇರಿಸಿ ಸಮರ್ಪಿಸಬೇಕು.


ಅಂದು ನೀವು ಸರ್ವೇಶ್ವರನಿಗೇ ಸುಗಂಧಕರವಾದ ಒಂದು ಹೋರಿ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು ಮತ್ತು ವರ್ಷದ ಏಳು ಕುರಿಗಳನ್ನು ಹಾಗು


ಹೀಗೆ ಸಭಿಕರು ದಹನಬಲಿದಾನಕ್ಕಾಗಿ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆಗಾಗಿಯೇ ಕೊಡಲಾದುವು.


ಲೇವಿಯರು, ಚರ್ಮ ಸುಲಿದು ಹೋಮಕ್ಕಾಗಿ ತೆಗೆದಿಟ್ಟಿದ್ದನ್ನು ಪ್ರತ್ಯೇಕಿಸಿ, ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರ, ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಸರ್ವೇಶ್ವರನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲೂ ಅದೇ ಕ್ರಮವನ್ನು ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು