Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:9 - ಕನ್ನಡ ಸತ್ಯವೇದವು C.L. Bible (BSI)

9 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:9
35 ತಿಳಿವುಗಳ ಹೋಲಿಕೆ  

ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಹೌದು, ಉದ್ಧಾರದ ಮಾರ್ಗದಲ್ಲಿರುವವರಿಗೂ ವಿನಾಶಮಾರ್ಗದಲ್ಲಿರುವವರಿಗೂ ಕ್ರಿಸ್ತಯೇಸುವೇ ದೇವರಿಗರ್ಪಿಸಿದ ಪರಿಮಳದಂತೆ ನಾವು ಇದ್ದೇವೆ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.


ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ಅದರ ಕರುಳುಗಳನ್ನೂ, ಕಾಲುಗಳನ್ನೂ ತೊಳೆಯಿಸಿ, ಬಲಿಪೀಠದಲ್ಲಿ ದಹನ ಬಲಿದ್ರವ್ಯದ ಮೇಲಿಟ್ಟು ಹೋಮಮಾಡಿದನು.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.


ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ, ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ದಹನಬಲಿಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದಲ್ಲಿ ದಹಿಸಿಬಿಡಬೇಕು. ಮಿಕ್ಕಬಲಿಗಳನ್ನು ಅರ್ಪಿಸುವಾಗ ರಕ್ತವನ್ನು ಸರ್ವೇಶ್ವರನ ಬಲಿಪೀಠದ ಮೇಲೆ ಸುರಿದುಬಿಟ್ಟು, ಮಾಂಸವನ್ನು ಊಟಮಾಡಬೇಕು.


ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.


ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.


“ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು.


ಆಮೇಲೆ ಮೋಶೆ ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಬಲಿಪೀಠದಲ್ಲಿ ದಹನಬಲಿ ದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನಬಲಿ, ಯಾಜಕಾಭಿಷೇಕ ಬಲಿಯಾಗಿತ್ತು.


ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.


ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.


ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,


ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೊಠಡಿಯೂ ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ದಹನ ಬಲಿಪ್ರಾಣಿಗಳ ಮಾಂಸವನ್ನು ತೊಳೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು