Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:1 - ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆರೋನನ ಮಕ್ಕಳಲ್ಲಿ ನಾದಾಬ್ ಅಬೀಹು ಎಂಬಿಬ್ಬರು ತಮ್ಮತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:1
38 ತಿಳಿವುಗಳ ಹೋಲಿಕೆ  

ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸರ್ವೇಶ್ವರನ ಸನ್ನಿಧಿಯಲ್ಲಿ ಬಹಿಷ್ಕೃತ ಅಗ್ನಿಯಿಂದ ಧೂಪಾರತಿ ಎತ್ತಿದುದರಿಂದ ಸತ್ತುಹೋದರು.


ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.


ಆರೋನನ ಇಬ್ಬರು ಮಕ್ಕಳು ಸರ್ವೇಶ್ವರ ಸ್ವಾಮಿಯ ಸನ್ನಿಧಿಗೆ ಬಂದು ನಾಶವಾದ ಮೇಲೆ


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.


ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


ತಮ್ಮ ಮಕ್ಕಳನ್ನು ಬಾಳ್‍ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.


ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.


ಅನ್ಯ ದೇವರುಗಳನ್ನಾಗಲಿ, ಪೂಜಿಸಬಾರದೆಂದು ನಿಷೇಧಿಸಿರುವ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ, ಪೂಜಿಸಿ, ಆರಾಧಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದುಷ್ಟವಾದುದನ್ನು ನಡೆಸಿದ್ದಾರೆ ಎಂದೂ


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ಅದರ ಮೇಲೆ ಪರಿಮಳದ್ರವ್ಯಗಳ ಧೂಪವನ್ನು ಹಾಕಿದನು;


ಪೀಠದ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.


ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’." ಎಂದನು.


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು