Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:24 - ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “‘ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಲ್ಲದೆ ಮುಂದೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:24
36 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವುದೋ ಅವರು ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಇಂಥವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣವನ್ನು ಮುಟ್ಟಬಾದರು. ಅವುಗಳನ್ನು ಅಶುದ್ಧವೆಂದೆಣಿಸಬೇಕು.


ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲ ವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.


“ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.


“ಒಬ್ಬನಿಗೆ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ, ಬೇರೆ ಯಾವ ಅಶುದ್ಧ ವಸ್ತುವಾಗಲಿ ತಗಲಿದರೆ, ಅವನಿಗೆ ತಿಳಿಯದೆ ಹೋದರೂ, ಅವನು ಅಶುದ್ಧನೂ ದೋಷಿಯೂ ಆಗುತ್ತಾನೆ.


“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು.


ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಂಜೆಯವರೆಗೂ ಅವನು ಮಡಿಗೆಟ್ಟವನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು