Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:25 - ಕನ್ನಡ ಸತ್ಯವೇದವು C.L. Bible (BSI)

25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:25
34 ತಿಳಿವುಗಳ ಹೋಲಿಕೆ  

ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಬಳಿಕ ನೀವು ಪಾಳೆಯದೊಳಗೆ ಬರಬಹುದು.”


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸಂಜೆಯವರೆಗೆ ಮಡಿಗೆಟ್ಟವನಾಗಿರಬೇಕು. ಇದು ಇಸ್ರಯೇಲರಿಗೂ ಅವರ ಮಧ್ಯೆ ವಾಸಿಸುವ ಇತರರಿಗೂ ಅನ್ವಯಿಸುವ ಶಾಶ್ವತ ನಿಯಮ.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.


ಆ ಆಕಳನ್ನು ಸುಟ್ಟವನು ಕೂಡ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನ ಮಾಡಿ ಆ ದಿನದ ಸಂಜೆಯ ತನಕ ಮಡಿಗೆಟ್ಟವನಾಗಿರಬೇಕು.


ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.


ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ಅಂತೆಯೇ ಮೋಶೆ ಬೆಟ್ಟದಿಂದ ಇಳಿದು ಬಂದು ಜನರನ್ನು ಪರಿಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅವು ಯಾವುವೆಂದರೆ, ಯಾವ ಪ್ರಾಣಿ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವುವೋ ಅವನು ಅಶುದ್ಧನಾಗುವನು.


ಆ ಏಳು ದಿನಗಳಾದ ಮೇಲೆ ಯಾಜಕನು ಮತ್ತೆ, ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಕೇವಲ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.


ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.


“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಂಜೆಯವರೆಗೂ ಅವನು ಮಡಿಗೆಟ್ಟವನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು