Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:45 - ಕನ್ನಡ ಸತ್ಯವೇದವು C.L. Bible (BSI)

45 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಿಮ್ಮ ದೇವರಾಗಿರುವದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನೇ ನಾನು; ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:45
22 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಇದೇ ಪಶು, ಪಕ್ಷಿ, ಜಲಚರ ಹಾಗು ಕ್ರಿಮಿಕೀಟಗಳ ವಿಷಯವಾದ ವಿಧಿ.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.


ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”


ಈಗ ನನ್ನ ಆಜ್ಞೆಗಳನ್ನೇ ಗಮನದಲ್ಲಿಟ್ಟು ಅವುಗಳನ್ನು ಅನುಸರಿಸಬೇಕು. ಹೀಗೆ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕು.


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.


ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು