Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 12:6 - ಕನ್ನಡ ಸತ್ಯವೇದವು C.L. Bible (BSI)

6 ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 12:6
15 ತಿಳಿವುಗಳ ಹೋಲಿಕೆ  

ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.


ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಕೊಡಬೇಕು.


ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.


ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.


“ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.


ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು.


ಹೆಣ್ಣುಮಗುವನ್ನು ಹೆತ್ತರೆ, ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಪೂರ್ಣಶುದ್ಧಳಾಗಲು ಅರವತ್ತಾರು ದಿನಗಳು ಕಾದಿರಬೇಕು.


ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು