Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:2 - ಕನ್ನಡ ಸತ್ಯವೇದವು C.L. Bible (BSI)

2 ಒಬ್ಬ ವ್ಯಕ್ತಿಯ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ, ಹೊಳೆಯುವ ಮಚ್ಚೆಯಾಗಲಿ ಕಾಣಿಸಿಕೊಂಡು ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕ ಆರೋನನ ಬಳಿಗೆ, ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಬ್ಬ ಮನುಷ್ಯನು ತನ್ನ ಚರ್ಮದ ಮೇಲೆ ಬಾವಾಗಲಿ, ಕಜ್ಜಿಯಾಗಲಿ, ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಚರ್ಮದಲ್ಲಿ ಕುಷ್ಠದ ವ್ಯಾಧಿಯಂತಿದ್ದರೆ, ಅವನು ಯಾಜಕನಾದ ಆರೋನನ ಬಳಿಗಾದರೂ ಇಲ್ಲವೆ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗಾದರೂ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:2
23 ತಿಳಿವುಗಳ ಹೋಲಿಕೆ  

“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ


ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ಪರೀಕ್ಷಿಸಬೇಕು. ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ


ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು.


ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಒಡೆಯರಾದ ಸ್ವಾಮಿ ಅವರ ನಡುನೆತ್ತಿಯನ್ನು ಹುಣ್ಣಾಗಿಸಿ ಬೋಳುಮಾಡುವರು. ಅವರ ಮಾನವನ್ನು ಬಯಲುಮಾಡುವರು.


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.


ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.


ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು


“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.


ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು - “ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಇರುವಂತೆ ತೋರುತ್ತದೆ,” ಎಂದು ಅವನಿಗೆ ತಿಳಿಸಬೇಕು.


ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನ ಶವದಂತೆ ಈಕೆ ಆಗುವುದು ಬೇಡ,” ಎಂದು ಕೇಳಿಕೊಂಡನು.


ಸರ್ವೇಶ್ವರ ಸ್ವಾಮಿ ಮೋಶೆ ಆರೋನರಿಗೆ ಹೇಳಿದ್ದೇನೆಂದರೆ;


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸಬೇಕು. ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಮಚ್ಚೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು