Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:29 - ಕನ್ನಡ ಸತ್ಯವೇದವು C.L. Bible (BSI)

29 ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೆಂಗಸಿನ ತಲೆಯಲ್ಲಿ ಆಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಿ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಒಬ್ಬ ಗಂಡಸಿನ ಅಥವಾ ಹೆಂಗಸಿನ ತಲೆಯ ನೆತ್ತಿಯಲ್ಲಿ ಅಥವಾ ಗಡ್ಡದಲ್ಲಿ ಸೋಂಕು ತಗಲಿ ಕಲೆ ಉಂಟಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:29
19 ತಿಳಿವುಗಳ ಹೋಲಿಕೆ  

ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II


ಎಲ್ಲಾ ಇಸ್ರಯೇಲರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ, ದುಃಖಗಳ ನಿಮಿತ್ತ ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ,


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.


ಆಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವಂಥಾದ್ದು ಆಗಿರುವುದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು..


ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.


“ನರಪುತ್ರನೇ, ಹರಿತವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಡು; ತಕ್ಕಡಿಯನ್ನು ತಂದು ತೂಗಿ ಆ ಕೂದಲನ್ನು ಸರಿಯಾಗಿ ಮೂರು ಭಾಗಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು