Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:4 - ಕನ್ನಡ ಸತ್ಯವೇದವು C.L. Bible (BSI)

4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:4
14 ತಿಳಿವುಗಳ ಹೋಲಿಕೆ  

ಹೀಗೆ ಮಿರ್ಯಾಮಳು ಏಳು ದಿವಸ ಪಾಳೆಯದ ಹೊರಗೆ ಇರಬೇಕಾಯಿತು. ಅವಳನ್ನು ಮರಳಿ ಸೇರಿಸಿಕೊಳ್ಳುವವರೆಗೆ ಇಸ್ರಯೇಲರು ಪ್ರಯಾಣ ಮಾಡಲಿಲ್ಲ.


ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸಬೇಕು. ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಮಚ್ಚೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.


ಅದು ಹಳೇ ಕುಷ್ಠರೋಗದ ಗುರುತು. ಅವನು ಅಶುದ್ಧನಾದ್ದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.


ಯಾಜಕನು ಆ ಇಸಬನ್ನು ನೋಡುವಾಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದಾಗ್ಯೂ ಅದು ಇರುವ ಕಡೆ ಕರೇಕೂದಲು ಇಲ್ಲದಿದ್ದರೆ ಯಾಜಕರು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.


ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿಯಾಗಲಿ ಇದ್ದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು. ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.


ಯಾಜಕನು ಅದನ್ನು ನೋಡಿ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇಡಿಸಬೇಕು.


ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.


ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು