Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:57 - ಕನ್ನಡ ಸತ್ಯವೇದವು C.L. Bible (BSI)

57 ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಆದರೆ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನಲ್ಲಾಗಲಿ ಕಂಡು ಬಂದರೆ ಅದು ಹರಡುವ ಬೂಜು ಮತ್ತು ಬೂಜಿರುವ ವಸ್ತುವನ್ನು ನೀನು ಬೆಂಕಿಯಿಂದ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:57
10 ತಿಳಿವುಗಳ ಹೋಲಿಕೆ  

ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ನಾರಿನ ಅಥವಾ ಉಣ್ಣೆಯ ನೆಯಿಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,


ಆದರೆ ತೊಳೆದ ಬಟ್ಟೆಯನ್ನು ಯಾಜಕನು ನೋಡುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿ ಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಬಟ್ಟೆಯಿಂದಾಗಲಿ ತೊಗಲಿನಿಂದಾಗಲಿ ನೆಯಿಗೆಯಿಂದಾಗಲಿ ಹೆಣಿಗೆಯಿಂದಾಗಲಿ ಕತ್ತರಿಸಿಬಿಡಬೇಕು.


ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ತೊಳೆದ ನಂತರ ಆ ಮಚ್ಚೆ ಕಾಣದೆ ಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು