Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:59 - ಕನ್ನಡ ಸತ್ಯವೇದವು C.L. Bible (BSI)

59 ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 “ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಉಣ್ಣೇಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬದು ಇದರಿಂದ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಉಣ್ಣೆ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಬೂಜು ಹಿಡಿದಿದ್ದರೆ ಪಾಲಿಸತಕ್ಕ ನಿಯಮಗಳಿವು. ಅದನ್ನು ಶುದ್ಧವೆಂದು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:59
12 ತಿಳಿವುಗಳ ಹೋಲಿಕೆ  

ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ, ನಾರಿನ ಬಟ್ಟೆಯಾಗಲಿ,


ನಾರಿನ ಅಥವಾ ಉಣ್ಣೆಯ ನೆಯಿಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,


ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ತೊಳೆದ ನಂತರ ಆ ಮಚ್ಚೆ ಕಾಣದೆ ಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -


ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯದಲ್ಲಿ ಅನುಸರಿಸಬೇಕಾದ ಕ್ರಮ ಇದು: ಅವನನ್ನು ಯಾಜಕನಿಗೆ ತೋರಿಸಬೇಕು.


ಶುದ್ಧೀಕರಣ ಬಲಿಗಳನ್ನು ಅರ್ಪಿಸುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿಯನ್ನು ಅನುಸರಿಸಬೇಕು.


ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು.


“ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.


ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,


ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ


ಇವೇ ಗಂಡಹೆಂಡಿರ ವಿಷಯವಾಗಿ ಹಾಗು ಇನ್ನೂ ಮದುವೆಯಿಲ್ಲದ ಪುತ್ರಿ ಮತ್ತು ಅವಳ ತಂದೆಯ ವಿಷಯವಾಗಿ ಸರ್ವೇಶ್ವರ ಸ್ವಾಮಿ ಕೊಟ್ಟ ನಿಯಮಗಳು.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು