Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:10 - ಕನ್ನಡ ಸತ್ಯವೇದವು C.L. Bible (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:10
26 ತಿಳಿವುಗಳ ಹೋಲಿಕೆ  

“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.


ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.


ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.


ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದಕೊಂಡು


ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,


ದಹನಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಟಗರು, ಪಾಪಪರಿಹಾರ ಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಕುರಿ, ಸಮಾಧಾನ ಬಲಿಗಾಗಿ ಕಳಂಕರಹಿತವಾದ ಒಂದು ಟಗರು.


ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.


ಎಂಟನೆಯ ದಿನ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹಾಗು ಇಸ್ರಯೇಲರ ಹಿರಿಯರನ್ನೂ ಕರೆಸಿದನು.


ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.


ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.


“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು.


ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು